ಉಳಿದು ಹೋದವರು ನಾವು ಕಳೆದು ಹೋದವರು
ಅವರ್ ಬಿಟ್ ಇವರ್ ಬಿಟ್
ಮಧ್ಯೆ ತುಳಿದು ಅಳಿದು ಹೋದವರು
ಒಹೋ ದೊಂಬರಾಟ ಇದೆ ರಾಜತಂತ್ರದಾಟ ಬಿತ್ತಿ ಕುಳಿತಿಹರು ಹತ್ತಿ ಇಳಿಯುವರು ಇಳಿಸಿದವರ್ ಹತ್ತುವರು
ಕುರುಡು ಕಣ್ಣು ನೋಟ ಆಟ ನೊಡ್ ಆಟ
ನೋಟ ನೋಡುವವರ ನಾವು ನೋಡುವವರ ಇದು ಯುದ್ಧವಲ್ಲ ಮನುಜ ಇದರ ಅಸ್ತ್ರ ಕುರುಕ್ಷೇತ್ರವಲ್ಲ ರಂಗಸ್ಥಳವಾಯ್ತ್
ರಾಜಕೀಯದ್ ಆಟ
ಬಲದಲಿ ಎಡದಲಿ ಬಿಲದಲಿ ಪಣದಳಿ ರಾಜಕೀಯದಾಟ ಮೂರು ಬಿಟ್ಟವರ ನೋಡು ಏಣಿಯಾಟ
ಗುಲಾಮಗಿರಿಯು ಅಲ್ಲ ಆದರಿಲ್ಲಿ ಗುಲಾಮರೇ ಎಲ್ಲ ಇದು ಮುಗಿಯದ ನೋಟ ಬಗೆಯದ ಆಟ
ಬಡಿಸುವ ಮುನ್ನ ಎಲೆಯು ಎಂಜಲಲ್ಲ
ಆದರಿಲ್ಲಿ ಎಲೆಯೆ ಎಂಜಲಯ್ಯ
ಎಂಜಲು ನುಂಗಿದ ನುಂಗುವ ರಕ್ಕಸರೆ ಏಲ್ಲಾ..
ಶೂನ್ಯವೆಲ್ಲ ...
ಈ ರಾಜಕೀಯದ್ ಆಟ...ನೋಡ್ ದೊಂಬರಾಟ
ರಾಜಕೀಯದಾಟ
ಕವನ ಹುಟ್ಟುಹಬ್ಬ.
ಸುಜ್ಞಾನದಿ ಹೊಳೆಯುತ್ತಿರುವ ನಕ್ಷತ್ರವು ನೀವು,
ನಿಮ್ಮ ಅನುಭೂತಿಯ ಸಹಕಾರವು ಬೇಕೆನಿಸಿದೆ ನನ್ನ ಕೊನೆಯವರೆಗೆ.
ಕಾಠಿಣ್ಯಕೆ ಉದ್ಗರಿಸದೆ ಮೌನಕ್ಕೆ ಶರಣಾಗೋ ನಿಮ್ಮ ಮನವು,
ಮುದುಡಿದ ಹಕ್ಕಿಗಳ ಸಂತೈಸುತ ಅವರ ಕೆಂದುಟಿಯಲಿ ಮೂಡಿಸುವುದು ಚಂದದೊಂದು ನಗುವ.
ನೊಂದ ಹೃದಯಕ್ಕೆ ಗೂಡಾಗಿದೆ ನಿಮ್ಮೆದೆಯ ಮಹಲು,
ಅಲ್ಲಿ ನಾ ಕಾಣದ ಪ್ರೀತಿಯ ಆಹ್ಲಾದಿಸುತ್ತ ನಿರಾಳ ಭಾವದಿ ನಾ ನಮಿಸುವೆ ದೇವರೇ ನನಗೆ ನಿಮಗಿಂತ ಯಾರಿಲ್ಲ ಮಿಗಿಲು.
ನಿಮ್ಮ ಅರಿವಿನ ಸಿಡಿಲು ಮನುಜರೆದೆಯಲಿ ಸಿಡಿದು,
ಸನ್ಮಾರ್ಗ ಚಿಗುರೊಡೆಯಲಿ ನವಿಲಂತೆ ನರ್ತಿಸುತ
ಗಗನದಿಕ್ತರಕ್ಕೆ ನಿಮ್ಹೆಸರ ಬರೆದು.
ನೋಟದಲೇ ನನ್ನ ನಿವೇದನೆಗೆ ಸ್ಪಂದಿಸೋ ನಿಮ್ಮ ಔದಾರಿಯ,
ವಸಂತ ಮಾಸದ ಕೋಗಿಲೆಯ ಮಾರ್ಧ್ವನಿಯೊಳಗೆ ಮೆರೆಯಬೇಕೆಂಬ ಆಸೆ ಮಹಾಶಯ.
ಕಳೆದ ಸಮಯವ ನೆನೆಯದೆ ಜೊತೆಗಿರುವ ಗಳಿಗೆಯ ತೋರೆಯದೆ,
ಸಂತಸದ ದಿನದಂದು ಸಂಭ್ರಮದ ಸಿಹಿಯಾಗಿ ನೀವ್ ಪೋರೆಯಿರಿ ನಿಮ್ಮವರ ಕೈತುತ್ತ ಮರೆಯದೆ.
ತಂಗಾಳಿ ಹೊತ್ತು ತರಲಿ ಶ್ರೀ ತಂಧದಂತ ನಿಮ್ಮ ವ್ಯಕ್ತಿತ್ವದ ಸಾರವ,
ಮಹತ್ವದ ಕನಸೊಂದ ನನಸಾಗಿಸೊ ಸಂಕಲ್ಪಕ್ಕೆ ಸಾಕ್ಷಿಯಾಗಲಿ
ಇಂದಿನ ನಿಮ್ಮ ಹುಟ್ಟು ಹಬ್ಬದ ಮಹೋತ್ಸವ.
ನನ್ನದೊಂದು ಪುಟ್ಟ ಹೃದಯ
ಅದರೊಳಗೆ ದೊಡ್ಡ ದೊಡ್ಡ ಕನಸುಗಳು,
ಆ ಕನಸುಗಳಿಗೆ ರೆಕ್ಕೆ ಕಟ್ಟಿ ಹಾರಿಸಿರುವೆ.
ನನ್ನ ಖುಷಿಯಲ್ಲಿ ತನ್ನ ಖುಷಿಯನ್ನು ಕಾಣುವೆ.
ನನ್ನ ಇಷ್ಟ ಕಷ್ಟಗಳನ್ನು ನಿನ್ನಮೇಲೆ ಹೇರಿರುವೆ.
ವರ್ಷಗಳು ಉರುಳಿದಂತೆ ನಮ್ಮಿಬ್ಬರ ಬಂಧ
ಬಿಗಿಯಾಗುತ್ತಿರಲೆಂದು ಆಶಿಸುವೆ.........
ಸ್ನೇಹ ಎಂದರೆ ಯಾವಾಗಲೂ
ನಮ್ಮ ಕಾಲುಗಳಂತಿರಬೇಕು.
ಯಾವ ಕಾಲು ಮುಂದೆ ಹೋಗಲಿ,
ಅಥವಾ ಯಾವ ಕಾಲು ಹಿಂದೆ ಉಳಿಯಲಿ,
ಸಂಬಂಧದಲ್ಲಿ ಎಂದಿಗೂ
ಅಂತರ ಬರಬಾರದು, ಹೊಂದಾಣಿಕೆ
ಅಳಿಯದೆಯೇ ಉಳಿಯಬೇಕು...!!
ಜೊತೆಗೂಡಿ ಮುಂದೆ ಸಾಗುವ
ಗುರಿಯೊಂದೇ ಪ್ರಬಲವಾಗಿರಬೇಕು...!!
ಎಮ್.ಎಸ್.ಭೋವಿ...✍️
.
..
...
....
ಕೆಚ್ಚೆದೆಯ ವೀರರು ತಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ
ಕಂಬನಿಯ ಮಿಡಿದರು
ಜೋರು ಬೊಬ್ಬಿತ್ತರು
ಬಿಲ್ಲನ್ನು ಎತ್ತಿದರು
ಬಾಣವನ್ನು ಬಿಟ್ಟರು
ಬ್ರಿಟಿಷರ ವಿರುದ್ಧ ಹೋರಾಡಿದರು
ಸೆರೆಮನೆ ಅನುಭವಿಸಿದರು
ಬಂದೂಕ ಎತ್ತಿದರು
ಕ್ರಾಂತಿಕಾರಿ ಗಳಾದರು
ಪ್ರಾಣ ತ್ಯಾಗ ಮಾಡಿದರು
ನಮಗೆ ಸ್ವತಂತ್ರ ತಂದು ಕೊಟ್ಟರು
ಅವರನ್ನು ಮತ್ತೆ ಮಗು ನೀ ನೆನಪಿಗೆ ತರು
ಮರೆಯಬೇಡ ಅವರ ಚಿನ್ನ ವಜ್ರ ಕಿಂತಲೂ ಹೆಚ್ಚು ಅವರು